ರಾಜ್ಯ

ರಾಜಕೀಯವಾಗಿ ವಿನಯ್ ಕುಲಕರ್ಣಿಯನ್ನ ಮುಗಿಸಲು ಪ್ರಹ್ಲಾದ್ ಜೋಶಿ ಪ್ಲಾನ್  

ಹುಬ್ಬಳ್ಳಿ prajakiran.com : ಬಿಜೆಪಿ ಮುಖಂಡ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಪ್ರಕರಣದಲ್ಲಿ ರಾಜಕೀಯ ಕೈವಾಡವಿದೆ. ಕೇಂದ್ರ ಸಚಿವ  ಪ್ರಹ್ಲಾದ್ ಜೋಶಿ ಅವರದ್ದೇ ಕೈವಾಡವಿದೆ ಎಂದು ಅವರು ನೇರವಾಗಿ ಆರೋಪಿಸಿದ್ದಾರೆ.

ನೇರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೇಲೆ ಆರೋಪ ಮಾಡಿದ ವಿಜಯ ಕುಲಕರ್ಣಿ, ನಮ್ಮನ್ನ ರಾಜಕೀಯವಾಗಿ ಮುಗಿಸೋದಿಕ್ಕೆ ಈ ರೀತಿ ಕುತಂತ್ರ ಮಾಡುತ್ತಿದ್ದಾರೆ ಎಂದಿದ್ದಾರೆ.

 

ನಿನ್ನೆ ನಡೆದ ಸಿಬಿಐ ದಾಳಿಯಲ್ಲಿ ವಿನಯ್ ಜೊತೆ ವಿಜಯ್ ಕುಲಕರ್ಣಿ ಯನ್ನೂ ಸಿಬಿಐ ವಶಕ್ಕೆ ಪಡೆದು, ವಿಚಾರಣೆ ನಡೆಸಿ  ಸಂಜೆ ಬಿಡುಗಡೆಗೊಳಿಸಿತ್ತು..

ಮುಂದೆ ಕಾನೂನು ರೀತಿಯಾಗಿ ನಾವು ಹೋರಾಟ ಮಾಡಲಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ

ಏನೇ ಬಂದರೂ ನಾವು ಎದುರಿಸಲು ಸಿದ್ಧರಿದ್ದೇವೆ..

ರಾಜಕೀಯವಾಗಿ ನಮ್ಮನ್ನ ಮುಕ್ತಾಯಗೊಳಿಸಲು ಈ ಪ್ರಕರಣ ನಮ್ಮ ಮೇಲೆ ತಳುಕು ಹಾಕಿದ್ದಾರೆ. ಏನೇ ಕುತಂತ್ರ ಮಾಡಿದರೂ ನಾವು ಕಾನೂನು ರೀತಿ ಹೋರಾಟ ನಡೆಸಲಿದ್ದೇವೆ ಎಂದರು.

ನಾವಿಬ್ಬರೂ ರಾಜಕೀಯವಾಗಿ ಬಲಿಷ್ಟರಾಗಿರೋ ಕಾರಣ ಈ ರೀತಿ ಮಾಡುತ್ತಿದ್ದಾರೆ ಎಂದಿದ್ದಾರೆ. ಲಿಂಗಾಯತ ಮುಖಂಡರು ಬೆಳೆಯಬಾರದು ಅನ್ನೋ ಕಾರಣಕ್ಕೆ ಈ ರೀತಿ ಕುತಂತ್ರ ನಡೆಸಿದ್ದಾರೆ.

ಆದರೆ ಇದನ್ನ ನಾವು ಸಮರ್ಥವಾಗಿ ಎದುರಿಸುತ್ತೇವೆ ಎಂದು ವಿಜಯ್ ಕುಲಕರ್ಣಿ ಮಾದ್ಯಮಗಳಿಗೆ‌ ಪ್ರತಿಕ್ರೀಯಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *