ಬೆಂಗಳೂರು prajakiran.com : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಮೆದುಳಿನಲ್ಲಿ ರಕ್ತ ಸ್ರಾವ ಆಗಿದ್ದರಿಂದ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು.
ಅಲ್ಲದೆ, ತೊಡೆಯ ಭಾಗದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.
ಸ್ಕಿಡ್ ಆಗಿ ಬೈಕ್ ಅಪಘಾತ ಆಗಿದ್ದರಿಂದ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.
ಶನಿವಾರ ರಾತ್ರಿ ಗೆಳೆಯನ ಮನೆಯಲ್ಲಿ ಊಟ ಮಾಡಿಕೊಂಡು ಬೈಕಿನಲ್ಲಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿತ್ತು.
ವಿಜಯ್ ಬೈಕ್ ಹಿಂಬದಿಯಲ್ಲಿ ಕುಳಿತಿದ್ದರು. ಇದರಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದರು.
ಸಂಚಾರಿ ವಿಜಯ ಅವರು
2011ರಲ್ಲಿ ‘ರಂಗಪ್ಪ ಹೋಗ್ಬಿಟ್ನಾ’ ಸಿನಿಮಾ ಮೂಲಕ ಸಂಚಾರಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.
ಬಳಿಕ 2015ರಲ್ಲಿ ‘ನಾನು ಅವನಲ್ಲ.. ಅವಳು’ ನಟನೆಗೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿಗಳು ದೊರೆತಿದ್ದವು.
ಇದಾದ ನಂತರದಲ್ಲಿ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ, ತಮ್ಮದೆ ಆದ ವಿಶಿಷ್ಟ ಛಾಪು ಮೂಡಿಸಿದ್ದರು.
ಸದ್ಯ, ಎರಡು ಕನ್ನಡ ಸಿನಿಮಾಗಳಲ್ಲಿ ಅಭಿನಯ ಮಾಡುತ್ತಿದ್ದರು. ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟ ದಲ್ಲಿರುವ ಅನೇಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮರೆದಿದ್ದರು.
ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗ ಬಡವಾಗಿದೆ.ಅವರ ನಿಧನಕ್ಕೆ ಸಿನಿರಂಗ ಕಣ್ಣೀರು ಮಿಡಿದಿದೆ.