ಧಾರವಾಡ prajakiran.com : ಧಾರವಾಡ ಜಿಲ್ಲೆಯ ಬಿಜೆಪಿ
ಜಿ.ಪಂ. ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಪೀಠ, ಡಿ. ೨೨ಕ್ಕೆ ಮುಂದೂಡಿದೆ.
ಧಾರವಾಡದ ೩ನೇ ಹೆಚ್ಚುವರಿ ಜಿಲ್ಲಾ ಹಾಗೂ ವಿಶೇಷ ಸಿಬಿಐ ನ್ಯಾಯಾಲಯ, ಇತ್ತೀಚೆಗೆ ವಿನಯ ಕುಲಕರ್ಣಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಹೀಗಾಗಿ ವಿನಯ ಕುಲಕರ್ಣಿ ಪರ ವಕೀಲರು, ಡಿ. ೧೫ರಂದು ಧಾರವಾಡ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.
ಅದರಂತೆ ಜಾಮೀನು ಅರ್ಜಿ ಹೈಕೋರ್ಟ್ ಏಕಸದಸ್ಯ ಪೀಠದ ಎದುರು ವಿಚಾರಣೆಗೆ ಬಂದಿತ್ತು. ವಿಚಾರಣೆ ಮಾಡಿದ ನ್ಯಾಯಪೀಠ, ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಗೆ ತಕರಾರು ಅಲ್ಲಿಸಲು ಸಿಬಿಐ ಪರ ವಕೀಲರಿಗೆ ನೋಟಿಸ್ ಜಾರಿಗೊಳಿಸಿ, ಡಿ. ೨೨ಕ್ಕೆ ವಿಚಾರಣೆ. ಮುಂದೂಡಿ ಆದೇಶ ಹೊರಡಿಸಿತು