ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವವಿನಯ ಕುಲಕರ್ಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಜ.21ಕ್ಕೆ ಧಾರವಾಡ ಹೈಕೋರ್ಟ್ ಮುಂದೂಡಿದೆ.

ಧಾರವಾಡದ ಹೈಕೋರ್ಟ್ ಎಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಕೆ.ಎನ್. ನಟರಾಜ್ ಅವರು ಈ ಮಹತ್ವದ ಆದೇಶ ಹೊರಡಿಸಿದರು.

ಧಾರವಾಡ ಹೈಕೋರ್ಟ್ ನಲ್ಲಿ ಬುಧವಾರ ಸಿಬಿಐ ಪರ ಸುಪ್ರೀಂ ಕೋರ್ಟ್ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಒಂದೂವರೆ ಗಂಟೆಗಳ ಕಾಲ ಮಾಜಿ ಸಚಿವ ವಿನಯ ಕುಲಕರ್ಣಿ ಪಾತ್ರ ಹಾಗೂ ಕೊಲೆಗೆ ಸಂಚು ನಡೆಸಿದ ಕುರಿತು ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ.

ವಿಚಾರಣೆ ಹಂತದಲ್ಲಿರುವಾಗ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು
ನ್ಯಾಯಾಲಯದ ಗಮನ ಸೆಳೆದರು. ‌

ಆದರೆ, ಸಿಬಿಐ ಪರ ವಕೀಲರ ವಾದಕ್ಕೆ ಪ್ರತಿಯಾಗಿ ಮಾಜಿ ಸಚಿವ ವಿನಯ ಕುಲಕರ್ಣಿ ಪರ ಹಿರಿಯ ವಕೀಲ ಶಶಿಕಿರಣಶೆಟ್ಟಿ ಪ್ರತಿವಾದ ಮಂಡಿಸಿ, ಅವರು ಯಾವುದೇ ರೀತಿಯ ಸಂಚು ಮಾಡಿಲ್ಲ.

ಇದೊಂದು ರಾಜಕೀಯ ಪ್ರೇರಿತ ಬಂಧನ ಎಂದು ಪ್ರತಿವಾದ ಮಂಡಿಸಿದರು.

ಇದಕ್ಕೆ ಪ್ರತಿಯಾಗಿ ಸಿಬಿಐ ಪರ ವಕೀಲರು ನ್ಯಾಯಾಧೀಶರ ಎದುರು ಹಲವಾರು ಜನ ಇವರ ಪಾತ್ರದ ಕುರಿತು 164 ಹೇಳಿಕೆ ನೀಡಿದ್ದಾರೆ ಎಂದು ಗಮನ ಸೆಳೆದರು.

ವಾದ ಪ್ರತಿ ವಾದ
ಆಲಿಸಿದ ಹೈಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿತು.
ಈಗಾಗಲೇ ಮಾಜಿ ಸಚಿವ ವಿನಯ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲು ಸೇರಿ ಎರಡು ತಿಂಗಳು ಗತಿಸಿದ್ದು, ಫೆ. 5 ಕ್ಕೆ 90 ದಿನಗಳು ಪೂರೈಸಲಿವೆ.

ಅಲ್ಲದೆ, ಸಿಬಿಐ ತನಿಖೆ ಮದುವರೆದಿದ್ದು, ಇನ್ನೂ ಅಂತಿಮ ಚಾರ್ಜ್ ಶೀಟ್ ಸಲ್ಲಸಿಲ್ಲ. ಅಲ್ಲಿಯವರೆಗೆ ಮಾಜಿ ಸಚಿವ ವಿನಯ ಕುಲಕರ್ಣಿ ಗೆ ಜಾಮೀನು ಸಿಗುತ್ತಾ ಇಲ್ಲಾ ಎಂಬುದನ್ನು ಕಾದು ನೋಡಬೇಕು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *