ರಾಜ್ಯ

ವಿನಯ ಕುಲಕರ್ಣಿ ಜೊತೆಗೆ ಕಾಂಗ್ರೆಸ ಪಕ್ಷವಿದೆ : ದೀಪಕ ಚಿಂಚೋರೆ

ಧಾರವಾಡ prajakiran.com : ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಜನ್ಮದಿನ ಮುಂಚೆಯೇ ವಶಕ್ಕೆ ತೆಗೆದುಕೊಂಡಿರುವುದು ಸರಿಯಾದ ಬೆಳವಣಿಗೆ ಅಲ್ಲ.

ಅವರ ಜೊತೆಗೆ ಕಾಂಗ್ರೆಸ್ ಪಕ್ಷ ಹಾಗೂ ನಾಯಕರು ಇದ್ದಾರೆ ಎಂದು ಎಐಸಿಸಿ ಸದಸ್ಯ ದೀಪಕ‌ ಚಿಂಚೋರೆ ತಿಳಿಸಿದ್ದಾರೆ.

ಅವರು ಶನಿವಾರ ಧಾರವಾಡದ ಹೋಟೆಲ್ ಮಂದಾರ ರಿಜೆನ್ಸಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಧಾರವಾಡದ ಕಾಂಗ್ರೆಸ್ ಮುಖಂಡರೊಂದಿಗೆ ಕೇಕ್‌ ಕತ್ತರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ‌

ಮಾಜಿ‌ ಸಚಿವ ವಿನಯ ಕುಲಕರ್ಣಿಗೆ ದೇವರು ಧೈರ್ಯ ಕೊಡಲಿ.
ನ್ಯಾಯಾಂಗ ವ್ಯವಸ್ಥೆ ಮೇಲೆ ನಮಗೆ ನಂಬಿಕೆಯಿದೆ ಎಂದು ಹೇಳಿದರು.

ಹೀಗಾಗಿ ಅವರು ಸಿಬಿಐನಿಂದ ಪಾರಾಗಿ ಬರ್ತಾರೆಂಬ ವಿಶ್ವಾಸ ನಮಗಿದೆ. ವಿನಯರನ್ನು ಏಕಾಏಕಿ ಬಂಧನ ಮಾಡಿರುವುದು ವಿಪರ್ಯಾಸದ ಸಂಗತಿ ಎಂದರು.

ಕರೊನಾ ಸಂದರ್ಭದಲ್ಲಿ ಏಕಾಏಕಿ ಅರೆಸ್ಟ್ ಮಾಡಿ ಗದ್ದಲ ಸೃಷ್ಟಿಸುವ ಅವಶ್ಯಕತೆ ಇರಲಿಲ್ಲ.

ಯೋಗೀಶಗೌಡರನ್ನು ಮೊದಲು ತಾಪಂ ಅಧ್ಯಕ್ಷ ಮಾಡಿದ್ದೇ ವಿನಯ ಕುಲಕರ್ಣಿ.
ವಿನಯ ಲಿಂಗಾಯತ ಸಮಾಜಕ್ಕೆ ಬಹಳ ಪ್ರಾಶಸ್ತ್ಯ ಕೊಟ್ಟಿದ್ದಾರೆ ಎಂದು
ಎಐಸಿಸಿ ಸದಸ್ಯ ದೀಪಕ‌ ಚಿಂಚೋರೆ ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದಣ್ಣ ಪ್ಯಾಟಿ, ರಮೇಶ ತಳಗೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ತುರಮುರಿ, ಮುತ್ತು ಗುರುಬಸನಗೌಡರ, ಸುರೇಶ್ ಚನ್ನಕೋಟಿ ಉಪಸ್ಥಿತರಿದ್ದರು.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *