ಧಾರವಾಡ ಪ್ರಜಾಕಿರಣ.ಕಾಮ್ : ಮಾಜಿ ಸಚಿವ ವಿನಯ ಕುಲಕರ್ಣಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಧಾರವಾಡ ವಿಧಾನ ಸಭಾ ಕ್ಷೇತ್ರ 71 ರಿಂದಲೇ ಸ್ಪರ್ಧಿಸಲೇಬೇಕು ಎಂದು ಒತ್ತಾಯಿಸಿ ಭಾನುವಾರ ಅವರ ಧಾರವಾಡದ ಮನೆ ಮುಂದೆ ಪ್ರತಿಭಟನೆ ನಡೆಯಿತು.
ವಿನಯ ಕುಲಕರ್ಣಿ ಅಭಿಮಾನಿ ಬಳಗದಿಂದ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಈ ಪ್ರತಿಭಟನೆ ನಡೆದಿದೆ.
ಇದೇ ವೇಳೆ ಬಸವರಾಜ ಜಾಧವ ಹಾಗೂ ಅಭಿಮಾನಿಗಳು ರಕ್ತದಲ್ಲಿ ಪತ್ರವನ್ನು ಬರೆದು ಶಿವಲೀಲಾ ವಿನಯ ಕುಲಕರ್ಣಿ ಅವರಿಗೆ ಮನವಿ ಮಾಡಿ ಗಮನ ಸೆಳೆದರು.
ಧಾರವಾಡ-71 ಕ್ಷೇತ್ರದ ಜೊತೆಗೆ ಶಿಗ್ಗಾಂವಿ ಕ್ಷೇತ್ರದಲ್ಲಿ ಸ್ಪರ್ಧೆ ಕುರಿತು ಚರ್ಚೆ ನಡೆಯುತ್ತಿದೆ.
ಇದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಲು ವಿನಯ ಕುಲಕರ್ಣಿಯವರು ಶೀಘ್ರ ತೀರ್ಮಾನ ಕೈಕೊಳ್ಳಬೇಕು.
ಪಕ್ಷದ ವರಿಷ್ಠರು ಕೂಡ ಅವಕಾಶ ಕಲ್ಪಿಸಿ ಕೊಡಬೇಕು. ಇಲ್ಲದೇ ಹೋದಲ್ಲಿ ಧಾರವಾಡ -71 ಬ್ಲಾಕ್ ಕಾಂಗ್ರೆಸ ನ ಎಲ್ಲಾ ಪದಾಧಿಕಾರಿಗಳು, ಮುಖಂಡರು ಸಾಮೂಹಿಕ ರಾಜೀನಾಮೆ ಕೊಡುತ್ತೇವೆ ಎಂದು ಎಚ್ಚರಿಸಿದರು.
ಈ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರವಿಂದ ಏಗನಗೌಡರ, ಈಶ್ವರ ಶಿವಳ್ಳಿ, ಮುಖಂಡರಾದ ಪರಮೇಶ ಕಾಳೆ, ಬಸವರಾಜ ಜಾಧವ, ಪ್ರಕಾಶ ಹಳಿಯಾಳ, ಭೀಮಪ್ಪ ಕಸಾಯಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.