ರಾಜ್ಯ

ಧಾರವಾಡ : ಯಾತ್ರಿ ನಿವಾಸ ಉದ್ಘಾಟನೆಗೆ ಬಂದ ಕೇಂದ್ರ ಸಚಿವ ಜೋಶಿಗೆ ಶಾಕ್ ನೀಡಿದ ವಿನಯ್ ಕುಲಕರ್ಣಿ ಬೆಂಬಲಿಗರು

ಧಾರವಾಡ prajakiran. com : ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ನೂತನ ಯಾತ್ರಿ ನಿವಾಸದ ಉದ್ಘಾಟನೆಗೆಂದು ಬಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಧಾರವಾಡ ಗ್ರಾಮೀಣ ಶಾಸಕಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಂಬಲಿಗರು ಶಾಕ್ ನೀಡಿದ ಘಟನೆ ನಡೆಯಿತು.

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಅವಧಿಯಲ್ಲಿ ಧಾರವಾಡದ ಹೆಬ್ಬಳ್ಳಿಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು.

ಆದರೆ, ಯಾತ್ರಿ ನಿವಾಸದ ಮುಂದೆ ಹಾಕಲಾಗುವ ಕಲ್ಲಿನ ಬೋರ್ಡ್‌ನಲ್ಲಿ ವಿನಯ್ ಕುಲಕರ್ಣಿ ಹೆಸರು ಹಾಕದೇ ಇರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಬೆಂಬಲಿಗರು, ಯಾತ್ರಿ ನಿವಾಸಕ್ಕೆ ಬೀಗ ಹಾಕಿ ಉದ್ಘಾಟನೆಗೆ ಅವಕಾಶ ಮಾಡಿಕೊಡಲಿಲ್ಲ.

ಜೋಶಿ, ಸಿ.ಟಿ.ರವಿ ಹಾಗೂ ಶಾಸಕ  ಬರುತ್ತಿದ್ದಂತೆ ಯಾತ್ರಿ ನಿವಾಸದ ಮುಂದೆ ಜಮಾಯಿಸಿದ್ದ ವಿನಯ್ ಬೆಂಬಲಿಗರು, ಕಲ್ಲಿನ ಬೋರ್ಡ್‌ನಲ್ಲಿ ವಿನಯ್ ಹೆಸರನ್ನೇ ಹಾಕಿಸಿಲ್ಲ. ಹೆಸರು ಹಾಕಿಸಿದ ನಂತರ ಇದನ್ನು ಉದ್ಘಾಟನೆ ಮಾಡಿ ಎಂದರು.

ಇದಕ್ಕೆ ಶಾಸಕ ಪ್ರತಿಕ್ರಿಯಿಸಿ, ಶಿಷ್ಟಾಚಾರದ ಪ್ರಕಾರ ಇದನ್ನು ಉದ್ಘಾಟನೆ ಮಾಡಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಹೇಳಿ ಕೈ ತೊಳೆ್ದುಕೊಂಡರು.

ಇದಕ್ಕೆ ಒಂದೂ ಮಾತನಾಡದ ಸಚಿವ ಜೋಶಿ ಇದು ನಮಗೇನೂ ಗೊತ್ತಿಲ್ಲ ಎಂದು ಅಲ್ಲಿಂದ ಹೊರಟು ಹೋದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *