ರಾಜ್ಯ

ಯೋಗೀಶಗೌಡ ಹತ್ಯೆ ಪ್ರಕರಣ : ಜಾಮೀನು ಕೋರಿ ಮಾಜಿ ಸಚಿವ ವಿನಯ ಕುಲಕರ್ಣಿಅರ್ಜಿ

ಧಾರವಾಡ prajakiran.com : ಧಾರವಾಡದ ಬಿಜೆಪಿ ಜಿ.ಪಂ. ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಜಾಮೀನು ಕೋರಿ ಅವರ ಪರ ವಕೀಲರು  ಅರ್ಜಿ ಸಲ್ಲಿಸಿದ್ದಾರೆ.

ಧಾರವಾಡದ ಮೂರನೇ ಅಧಿಕ ವಿಶೇಷ ಹಾಗೂ ಸಿಬಿಐ ನ್ಯಾಯಾಲಯಕ್ಕೆ ಮಂಗಳವಾರ ಅವರ ವಕೀಲರಾದ ಭರತ ಅರ್ಜಿ ಸಲ್ಲಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ನ್ಯಾಯಾಲಯ ಕೆಲವು ನಿಯಮಗಳನ್ನು ಅಳವಡಿಸಿಕೊಂಡಿದ್ದು, ಸಲ್ಲಿಕೆಯಾಗುವ ಪ್ರತಿ ಅರ್ಜಿಯನ್ನು ಒಂದು ದಿನ ಕಾಯ್ದಿಟ್ಟು, ಸ್ಯಾನಿಟೈಜ್ ಮಾಡಿದ ನಂತರವೇ ನೋಂದಣಿ ಮಾಡಲಾಗುತ್ತದೆ.

೨೪ ಗಂಟೆಗಳ ನಂತರವೇ ನ್ಯಾಯಾಧೀಶರ ಎದುರು ವಿಚಾರಣೆಗೆ ಬರುವ ಸಾಧ್ಯತೆಇದೆ. ಹೀಗಾಗಿ ವಿನಯಕುಲಕರ್ಣಿ ಅವರ ಜಾಮೀನು ಅರ್ಜಿ ನೋಂದಣಿ ಮತ್ತು ವಿಚಾರಣೆ ವಿಳಂಬವಾಗಿದೆ ಎನ್ನಲಾಗಿದೆ.

ವಿನಯ ಕುಲಕರ್ಣಿ ಅವರನ್ನು ಸೋಮವಾರ ವೀಡಿಯೊ ಕಾನ್ಪರೆನ್ಸ್ ಮೂಲಕ ವಿಚಾರಣೆ ನಡೆಸಿ, ಜಿಲ್ಲಾ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದಾದ ನಂತರ ಜಾಮೀನು ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ.

ಹೀಗಾಗಿ ಗುರುವಾರ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಗಳಿವೆ.

ನ. 5ರಂದು ಬೆಳ್ಳಂಬೆಳಗ್ಗೆ ಮಾಜಿ ಸಚಿವ ವಿನಯ ಕುಲಕರ್ಣಿಯವರ ಮನೆ ಬಾಗಿಲು ತಟ್ಟಿದ್ದ ಸಿಬಿಐ ಅವರನ್ನು ಮೂರುದಿನಗಳ ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇಂದಿಗೆ ಒಂದುವಾರ ಕಳೆದಂತಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *