ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಮಾಜಿ ಸಚಿವ ವಿನಯ ಕುಲಕರ್ಣಿ ಪರ ವಕೀಲರು ನ್ಯಾಯಾಲಯಕ್ಕೆ ಮತ್ತೆ ಜಾಮೀನು ಅರ್ಜಿ ಸಲ್ಲಿಸಿದರು.
ಧಾರವಾಡದ ಮೂರನೇ ಹೆಚ್ಚುವರಿ ಜಿಲ್ಲಾ ಹಾಗೂ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಆಗಮಿಸಿದ ವಕೀಲರು ಜಾಮೀನು ಅರ್ಜಿ ಸಲ್ಲಿಸಿದರು.
ಈ ಹಿಂದೆ ನವೆಂಬರ್ 9ಕ್ಕೆ ಜಾಮೀನು ಅರ್ಜಿಯನ್ನು ಭರತ್ ಕುಮಾರ್ ಎಂ ಅವರು
ಸಲ್ಲಿಸಿದ್ದರು.
ಆದರೆ ಆ ಬಳಿಕ ಅದನ್ನು ಅವರು ಕುಟುಂಬ ಸದಸ್ಯರ ಕೋರಿಕೆ ಮೇರೆಗೆ ಮರಳಿ ಪಡೆದಿದ್ದರು.
ಇದೀಗ ಮತ್ತೆ ಬಾಹುಬಲಿ ವಕೀಲರು ಇಂದು ಹೊಸ ಜಾಮೀನು ಅರ್ಜಿ ಸಲ್ಲಿಸಿದರು.
ಈ ಅರ್ಜಿ ಯಾವಾಗ ವಿಚಾರಣೆಗೆ ಬರುತ್ತದೆ. ಅದಕ್ಕೆ ಸಿಬಿಐ ಅಧಿಕಾರಿಗಳು ಯಾವ ರೀತಿಯ ತಕರಾರು ಅರ್ಜಿ ಸಲ್ಲಿಸುತ್ತಾರೆ ಎಂಬುದರ ಮೇಲೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯ ಭವಿಷ್ಯ ನಿರ್ಧಾರ ವಾಗಲಿದೆ.
ಅಲ್ಲಿಯವರೆಗೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿಯೇ ಕಾಲ ಕಳೆಯಬೇಕು.