ರಾಜ್ಯ

ಮಾಜಿ ಸಚಿವ ವಿನಯ್ ಕುಲಕರ್ಣಿ ಬ್ಯಾನರ್ ತೆರವುಗೋಳಿಸಿರುವುದಕ್ಕೆ ಕಾಂಗ್ರೆಸ್ ಆಕ್ರೋಶ…..!

ಧಾರವಾಡ prajakiran.com : ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜನ್ಮದಿನದ ಹಿನ್ನಲೆಯಲ್ಲಿ ಧಾರವಾಡದ ವಿವಿಧ ಸ್ಥಳದಲ್ಲಿ ಅನೇಕ ಬ್ಯಾನರ್ ಗಳನ್ನು ಹಾಕಲಾಗಿತ್ತು.

ಆದರೆ ಸಿಬಿಐ ಅಧಿಕಾರಿಗಳು ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಅವರನ್ನು ಹೆಚ್ಚಿನ  ವಿಚಾರಣೆಗಾಗಿ ವಶಕ್ಕೆ ಪಡೆದಿರುವ ಬೆನ್ನಲ್ಲೇ ಅವುಗಳನ್ನೂ ತೆರವುಗೊಳಿಸಲಾಗಿದೆ.

ರಾಜಕೀಯ ಕುತಂತ್ರದಿಂದ ಬಂಧನ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದ್ದರು. ಅದರ ನಡುವೆ ಆಡಳಿತ ಪಕ್ಷದ ಕುಮ್ಮಕ್ಕಿನಿಂದ ಅವರ ಹುಟ್ಟು ಹಬ್ಬದ ಅಂಗವಾಗಿಅಳವಡಿಸಲಾದ ಬ್ಯಾನರ್ ಗಳನ್ನುಕೂಡ ತೆರವುಗೊಳಿಸಲಾಗಿದೆ.

ಈ ತರಹದ ದ್ವೇಷದ ರಾಜಕಾರಣ ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಆನಂದ ಸಿಂಗನಾಥ್ ಆರೋಪಿಸಿದ್ದಾರೆ.

ಆದರೆ ಮಹಾನಗರ ಪಾಲಿಕೆ ಅಧಿಕಾರಿಗಳು ಇದನ್ನು ನಿರಾಕರಿಸಿದ್ದು, ನಗರದ ಹಲವಡೆ ಪಾಲಿಕೆ ಪರವಾನಿಗೆ ಇಲ್ಲದೆ ಅಳವಡಿಸಿದ್ದರು.

ಅದಕ್ಕೆ ತೆರವುಗೊಳಿಸಲಾಗಿದೆ. ಪರವಾನಿಗೆ ಪಡೆದಿದ್ದರೆ ತೆರವುಗೊಳಿಸುತ್ತಿರಲಿಲ್ಲಎಂದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *