ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಗುರುವಾರ ಬೆಳ್ಳಂ ಬೆಳಗ್ಗೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಬಾರಾಕೋಟ್ರಿ ನಿವಾಸದ ಕದವನ್ನು ತಟ್ಟಿದೆ.
ಹಲವು ಅಧಿಕಾರಿಗಳ ತಂಡ ಏಕಾಎಕಿ ಅವರ ಮನೆಗೆ ತೆರಳಿ ಅವರನ್ನು ಕರೆದುಕೊಂಡು ಉಪನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬರುವಂತೆ ಸೂಚಿಸಿದರು. ಆಗ ಅವರ ಪುತ್ರಿ ತಮ್ಮ ಕಾರಿನಲ್ಲಿಯೇ ಅವರನ್ನು ಕರೆದುಕೊಂಡು ಬಂದು ಪೊಲೀಸ್ ಠಾಣೆಗೆ ಬಿಟ್ಟರು.
ಇದೇ ವೇಳೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಅವರ ಸಹೋದರ ವಿಜಯ ಕುಲಕರ್ಣಿಯವರ ಮನೆಗೆ ತೆರಳಿದ ಸಿಬಿಐ ಅಧಿಕಾರಿಗಳ ಇನ್ನೊಂದು ತಂಡ ಅವರನ್ನು ಕೂಡ ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದೆ.
ಇಬ್ಬರನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳ ತಂಡ ಕಳೆದ ಹಲವು ಗಂಟೆಗಳಿಂದಅವರನ್ನು ವಿಚಾರಣೆಗೆ ಒಳಪಡಿಸಿದೆ.
ಇವರಿಬ್ಬರು ಅಲ್ಲದೆ, ಅವರಿಗೆ ಸಹಕರಿಸಿದ ಆರೋಪದ ಹಿನ್ನಲೆಯಲ್ಲಿ ಅವರ ಆಪ್ತರಾದ ಶ್ರೀ ಪಾಟೀಲ, ಹಾಗೂ ರೂಪೇಶ ಸೇರಿದಂತೆ ಹಲವರನ್ನು ವಿಚಾರಣೆಗೆ ಕರೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.