ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಮತ್ತೇ 14 ದಿನ ವಿಸ್ತರಣೆ

ಧಾರವಾಡ prajakiran.com :
ಧಾರವಾಡ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ
ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೇ 14 ದಿನ ಗಳ ವಿಸ್ತರಿಸಲಾಗಿದೆ.

ಅದೇ ರೀತಿ ಈ ಪ್ರಕರಣದಲ್ಲಿ ಬಂಧಿತರಾಗಿರುವ
ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ
ನ್ಯಾಯಾಂಗ ಬಂಧನ ಅವಧಿಯನ್ನು ಕೂಡ ಮತ್ತೇ 14 ದಿನ ವಿಸ್ತರಣೆ ಮಾಡಲಾಗಿದೆ.

ಧಾರವಾಡ ಜಿಲ್ಲೆಯ ಮೂರನೇ ಅಧಿಕ ಹಾಗೂ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ. ಗಂಗಾಧರ ಅವರು ಈ ಮಹತ್ವದ ಆದೇಶ ಹೊರಡಿಸಿದರು.

ಹೀಗಾಗಿ ಮಾಜಿ ಸಚಿವ ವಿನಯ ಕುಲಕರ್ಣಿ
ಫೆ. 19ರ ವರೆಗೆ ನ್ಯಾಯಾಂಗ ಬಂಧನದಲ್ಲಿಯೇ ಕಾಲ ಕಳೆಯಬೇಕಾಗಿದೆ.

ಈಗಾಗಲೇ ರಾಕೇಶ ರಂಜನ್ ನೇತೃತ್ವದ ಸಿಬಿಐ ಅಧಿಕಾರಿಗಳ ತಂಡ ಚಾರ್ಜ‌ಶೀಟ್ ಸಲ್ಲಿಸಿದೆ.

ಅಲ್ಲದೆ, ನಾಳೆಗೆ ಫೆ. 5ಕ್ಕೆ ವಿನಯ ಕುಲಕರ್ಣಿ ಬಂಧನವಾಗಿ ಮೂರು ತಿಂಗಳು ಭರ್ತಿಯಾಗಲಿವೆ.

ಸದ್ಯ ಬೆಳಗಾವಿ ಜಿಲ್ಲೆಯ
ಹಿಂಡಲಗಾ ಜೈಲಿನಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅವರ ಸೋದರ ಮಾವ ಚಂದ್ರಶೇಖರ ಇಂಡಿ ಇರುವುದನ್ನು ಇಲ್ಲಿ ಸ್ಮರಿಸಬಹುದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *