ರಾಜ್ಯ

ಧಾರವಾಡ ಗ್ರಾಮೀಣದಿಂದಲೇ ಮಾಜಿ ಸಚಿವ ವಿನಯ ಕುಲಕರ್ಣಿ ಅಖಾಡಕ್ಕೆ

ಧಾರವಾಡ ಗ್ರಾಮೀಣದಿಂದಲೇ ಮಾಜಿ ಸಚಿವ ವಿನಯ ಕುಲಕರ್ಣಿ ಅಖಾಡಕ್ಕೆ

ಎರಡನೇ ಪಟ್ಟಿಯಲ್ಲಿ
ಎ ಐ ಸಿ ಸಿ ಗ್ರೀನ್ ಸಿಗ್ನಲ್

ಸಿಎಂ ಕ್ಷೇತ್ರದಿಂದ ಸ್ಪರ್ಧಿಸಲು ವಿನಯ ಹಿಂದೇಟು

ನವದೆಹಲಿ ಪ್ರಜಾಕಿರಣ.ಕಾಮ್ : ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡ ವಿಧಾನ ಸಭಾ ಕ್ಷೇತ್ರ-71 ರ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ವಿನಯ ಕುಲಕರ್ಣಿ ಹೆಸರು ಅಂತಿಮಗೊಳಿಸಲಾಗಿದೆ.
ಆ ಮೂಲಕ ಸಿಎಂ ತವರು ಕ್ಷೇತ್ರ ಶಿಗ್ಗಾಂವಿಯಿಂದ ಸ್ಪರ್ಧಿಸಿ ಬಸವರಾಜ ಬೊಮ್ಮಾಯಿಗೆ ಪಂಚಮಸಾಲಿ ಸಮಾಜದ ಟಕ್ಕರ್ ನೀಡುವ ಲೆಕ್ಕಾಚಾರದಿಂದ ಹಿಂದಕ್ಕೆ ಸರಿದಂತಾಗಿದೆ.
ಇಂದು ನಡೆದ ಎ ಐ ಸಿ ಸಿ ಚುನಾವಣಾ ಸಮಿತಿ ಸಭೆಯಲ್ಲಿ ವಿನಯ ಕುಲಕರ್ಣಿ ಹೆಸರು ಪ್ರಕಟಿಸುವ ಮೂಲಕ ಎಲ್ಲರ ನಿರೀಕ್ಷೆ ಹುಸಿಗೊಳಿಸಲಾಗಿದೆ. ಹೀಗಾಗಿ ಈಗಾಗಲೇ
ಗ್ರಾಮೀಣ ಭಾಗದಲ್ಲಿ ಒಂದು ಸುತ್ತಿನ ಮಿಂಚಿನ ಪ್ರಚಾರ ನಡೆಸಿ ಕ್ಷೇತ್ರದಲ್ಲಿ ಹಿಡಿತ
ಇಟ್ಟುಕೊಂಡಿದ್ದ ಇಸ್ಮಾಯಿಲ್ ತಮಟಗಾರ ಅವರನ್ನು ನಿರಾಶೆ ಮೂಡಿಸಿದೆ.
ಅವರ ಮುಂದಿನ‌ ನಡೆ ಏನಾಗಬಹುದು ಎಂಬುದು ಇನ್ನು ನಿಗೂಢವಾಗಿದೆ.
ಅವರ ಬೆಂಬಲಿಗರು ಗುರುವಾರ ಧಾರವಾಡದ ಜಯನಗರ ನಿವಾಸದ ಮುಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಕಾಂಗ್ರೆಸ್ ಮುಖಂಡರಿಗೆ ಒತ್ತಡ ಹೇರಲು ನಿರ್ಧರಿಸಿದ್ದರು.
ಇದು ಕಾಂಗ್ರೆಸ್ ಪಕ್ಷದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದು ಕಾದು ನೋಡಬೇಕಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *