ಧಾರವಾಡ prajakiran.com :
ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಮಂಗಳವಾರ ಬೆಳಗ್ಗೆ 11 ಗಂಟೆಗೆ
ಕೋರ್ಟ್ ಅನುಮತಿ ಪಡೆದು ಧಾರವಾಡಕ್ಕೆ ಆಗಮಿಸುತ್ತಿದ್ದಾರೆ.
ವಿನಯ್ ಕುಲಕರ್ಣಿ ಆಗಮನದ ಹಿನ್ನೆಲೆಯಲ್ಲಿ ಧಾರವಾಡದ ಮಿನಿ ವಿಧಾನಸೌಧ ಸುತ್ತಮುತ್ತ
ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಸಬ್ ರಿಜಿಸ್ಟರ್ ಕಚೇರಿಗೆ ಆಗಮಿಸಿ ವಿನಯ್ ಕುಲಕರ್ಣಿ ತಮ್ಮ ಡೈರಿ ಫಾರ್ಮ್ ಹಾಗೂ ಇತರೆ ಅರ್ಥಿಕ ವ್ಯವಹಾರ ನಡೆಸಲು ಕುಟುಂಬದ ಸದಸ್ಯರಿಗೆ ಜಿಪಿಎ ನೀಡಲಿದ್ದಾರೆ.
ಮಾಜಿ ಸಚಿವ ವಿನಯ ಕುಲಕರ್ಣಿ ಕಳೆದ ನವೆಂಬರ್ 5ರಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.
ಹೀಗಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿ ಯವರನ್ನು ಪೊಲೀಸ ಸರ್ಪಗಾವಲಿನಲ್ಲಿ ಕರೆದುಕೊಂಡು ಬಂದು ಮತ್ತೆ ಬೆಳಗಾವಿಗೆ ಕರೆದುಕೊಂಡು ಹೋಗಲಿದ್ದಾರೆ.
ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ
ಯಾವುದೇ ಕಾರ್ಯಕರ್ತರು, ಇತರರನ್ನು ಭೇಟಿಯಾಗಲು ಅವಕಾಶ ಇಲ್ಲ.
ಕೇವಲ ಉಪ ನೋಂದಣಾಧಿಕಾರಿ ಕಚೇರಿಗೆ ಆಗಮಿಸಿ ಜಿಪಿಎ ನೀಡಿ ಮರಳಿ ವಾಪಸ್ ತೆರಳಲಿದ್ದಾರೆ. ಹೀಗಾಗಿ ಎಲ್ಲಡೆ ಪೊಲೀಸ್ ಕಾವಲು ಹಾಕಲಾಗಿದೆ.