ರಾಜ್ಯ

ಮಾಜಿ ಸಚಿವ ವಿನಯ‌ ಕುಲಕರ್ಣಿಗೆ ಶನಿವಾರ ಬಿಡುಗಡೆ ಭಾಗ್ಯ

ಬೆಳಗಾವಿ prajakiran.com :
ಜಾಮೀನು ಸಿಕ್ಕು ಒಂದು ದಿನ ಕಳೆದರೂ ( ಇಂದು) ಶುಕ್ರವಾರ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಡುಗಡೆ ಭಾಗ್ಯ ಇರಲಿಲ್ಲ‌.

ಬದಲಿಗೆ ನಾಳೆ ಶನಿವಾರ ಬಿಡುಗಡೆ ಭಾಗ್ಯ ದೊರೆಯಲಿದೆ ಎಂದು ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.

ಜಾಮೀನು ಆದೇಶ ಪ್ರತಿ ಹಿಂಡಲಗಾ ಜೈಲು ಅಧಿಕಾರಿಗಳಿಗೆ ತಲುಪದ ಹಿನ್ನೆಲೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ದಿನ ಬಿಡುಗಡೆ ಭಾಗ್ಯ ದೊರೆಯಲಿಲ್ಲ.

ಹೀಗಾಗಿ  ನಾಳೆ (ಶನಿವಾರ) ವಿನಯ್ ಕುಲಕರ್ಣಿ ಗೆ ಬಿಡುಗಡೆ ಭಾಗ್ಯ ಕೊನೆಗೂ ದೊರೆಯಲಿದೆ.

ಇಂದು (ಶುಕ್ರವಾರ) ಹಿಂಡಲಗಾ ಜೈಲಿಗೆ ಭೇಟಿ ನೀಡಿ ತೆರಳಿದ ಬೆಳಗಾವಿ ಗ್ರಾಮೀಣ ಠಾಣೆ ಸಿಪಿಐ ಸುನೀಲ್ ಕುಮಾರ್ ಹಾಗೂ ಜೈಲು ಅಧಿಕಾರಿ ಚರ್ಚೆ ನಂತರ ಭದ್ರತೆ ವಾಪಸ್ ಪಡೆಯಲಾಗಿತ್ತು.

ಹಿಂಡಲಗಾ ಜೈಲಿನ‌ ಎದುರು ಒದಗಿಸಿದ್ದ ಭದ್ರತೆ ವಾಪಸ್ ಪಡೆಯಲಾಗಿತ್ತು. ನಾಳೆ ಮತ್ತೆ ಭದ್ರತಾ ವ್ಯವಸ್ಥೆ ಬಿಗಿಗೊಳಿಸುವ ಸಾಧ್ಯತೆ ಇದೆ.

ಹಿಂಡಲಗಾ ಜೈಲಿನ ಸುತ್ತ ಬೆಳಗಾವಿ ಗ್ರಾಮೀಣ ಪೊಲೀಸರು ಹಾಗೂ ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗುತ್ತದೆ ಎಂದು ತಿಳಿದುಬಂದಿದೆ.

ನಾಳೆ ವಿನಯ ಕುಲಕರ್ಣಿ ಬೆಂಬಲಿಗರು ಶಕ್ತಿ ಪ್ರದರ್ಶನ ನಡೆಸುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅವರು ಅಲ್ಲಿಂದ ನೇರವಾಗಿ ಬೆಂಗಳೂರು ತೆರಳುತ್ತಾರಾ ಅಥವಾ ಬೆಂಬಲಿಗರ ಸಭೆ ನಡೆಸಿ ನಿರ್ಗಮಿಸುತ್ತಾರಾ ಎಂಬುದನ್ನು ಕಾದು ನೋಡಬೇಕು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *