ಧಾರವಾಡ prajakiran.com : ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಬುಧವಾರ ನಡೆಯಿತು.
ಸಿಬಿಐ ಪರ ಕೇಂದ್ರ ಸರಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ. ರಾಜು ವಾದ ಮಂಡಿಸಿದರು.
ದೆಹಲಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಸರಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಸಿಬಿಐ ಪರ ವಾದ ಮಂಡನೆ ಮಾಡಿ ನ್ಯಾಯಾಲಯದ ಗಮನ ಸೆಳೆದರು.
ಈ ವೇಳೆ ವಿನಯ ಕುಲಕರ್ಣಿ ಪ್ರಕರಣದ ಮಾಸ್ಟರ್ ಮೈಂಡ್. ಮೇಲಾಗಿ ಅವರು ಭಾರೀ ಪ್ರಭಾವಿ ವ್ಯಕ್ತಿ. ಒಂದು ವೇಳೆ ಜಾಮೀನು ಸಿಕ್ಕರೆ ಅವರು ಸಾಕ್ಷಿ ನಾಶ ಮಾಡೋ ಸಾಧ್ಯತೆ ಇದೆ.
ಹೀಗಾಗಿ ಯಾವುದೇ ಕಾರಣಕ್ಕೂ ಅವರಿಗೆ ಜಾಮೀನನ್ನು ನೀಡಬಾರದು ಎಂದು .ಮನವಿ ಮಾಡಿದರು.
ಈ ವಾದ ಆಲಿಸಿದ ಸಿಬಿಐ ವಿಶೇಷ ನ್ಯಾಯಾಲಯ ಅದಕ್ಕೆ ಪ್ರತಿವಾದ ಮಂಡಿಸಲು ವಿನಯ ಪರ ವಕೀಲರಿಗೆ ಅವಕಾಶ ನೀಡಿದರು.
ಸಿಬಿಐ ಪರ ವಕೀಲರ ವಾದವನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಆಲಿಸಿದ ನಂತರ ವಿನಯ ಪರ ವಕೀಲರ ಪ್ರತಿವಾದವನ್ನು ಕೋರ್ಟ್ ಹಾಲ್ ಗೆ ಸ್ಥಳಾಂತರಿಸಲಾಯಿತು.
ಈ ವೇಳೆ ವಿನಯ ಪರ ವಕೀಲ ಬಾಹುಬಲಿ ಸುಮಾರು ಅರ್ಧ ಗಂಟೆ ವಾದ ಮಂಡಿಸಿದರು.
ವಿಚಾರಣೆಗೆ ಸಹಕರಿಸುತ್ತಿದ್ದಾರೆ. ಅವರಿಗೆ ಯಾವುದೇ ಷರತ್ತು ಹಾಕಿದರೂ ಪಾಲಿಸುತ್ತಾರೆ. ಹೀಗಾಗಿ ಅವರಿಗೆ ಜಾಮೀನು ನೀಡಿ ಅಂತಾ ಕೋರ್ಟ್ ಗೆ ಮನವಿ ಮಾಡಿಕೊಂಡರು.
ಎರಡೂ ಕಡೆಯ ವಕೀಲರ ವಾದವನ್ನು ಆಲಿಸಿದ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿಯ ಮೇಲಿನ ತೀರ್ಪನ್ನು ಕಾಯ್ದಿರಿಸಿ ಡಿಸೆಂಬರ್ 14 ಕ್ಕೆ ಆದೇಶ ಪ್ರಕಟಿಸೋದಾಗಿ ತಿಳಿಸಿತು.
ಒಟ್ಟಿನಲ್ಲಿ ಕಳೆದೊಂದು ತಿಂಗಳಿನಿಂದ ಜೈಲಿನಲ್ಲಿರೋ ಮಾಜಿ ಸಚಿವ ವಿನಯ ಕುಲಕರ್ಣಿಗೆ ಡಿಸೆಂಬರ್ 14 ರಂದು ಜೈಲಾ ಅಥವಾ ಬೇಲಾ ಅನ್ನೋದನ್ನು ಕಾದು ನೋಡಬೇಕಿದೆ.