ರಾಜ್ಯ ಚುನಾವಣಾ ಆಯೋಗ ಮಹತ್ವ ಆದೇಶ
ಧಾರವಾಡ prajakiran.com ಆ.26: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ ಸೆಪ್ಟೆಂಬರ್ 03 ರಂದು ನಡೆಯಲಿರುವ ಮತದಾನದ ಅವಧಿಯನ್ನು 1 ಗಂಟೆ ವಿಸ್ತರಿಸಿ, ಅಂದರೆ ಸಂಜೆ 5 ಗಂಟೆಯ ಬದಲಾಗಿ 6 ಗಂಟೆಯವರೆಗೆ ವಿಸ್ತರಿಸಿ ರಾಜ್ಯ ಚುನಾವಣಾ ಆಯೋಗವು ಆದೇಶಿಸಿದೆ ಎಂದು ಜಿಲ್ಲಾ ಚುನಾಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ರಾಜ್ಯಚುನಾವಣಾ ಆಯೋಗದ ಆದೇಶದಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಯ ಮತದಾನ (ಸೆ.3) ದಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಮತದಾನ ನಡೆಯಲಿದೆ.
ಪ್ರಸ್ತುತ ಕೊವಿಡ್ ಸೋಂಕಿನ ಹಿನ್ನೆಲೆಯಲ್ಲಿ ಹಾಗೂ ಕೇಂದ್ರ ಗೃಹ ಮಂತ್ರಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾರ್ಗಸೂಚಿಯನ್ವಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಚುನಾವಣೆ ನಡೆಸುವುದು ಅವಶ್ಯವಿದೆ.
ಚುನಾವಣೆ ನಡೆಯಲಿರುವ ಎಲ್ಲ ಮತಗಟ್ಟೆಗಳಿಗೆ ಕೋವಿಡ್ ಮುಂಜಾಗ್ರತಾ ಪರಿಕರಗಳನ್ನೊಳಗೊಂಡ ಕೋವಿಡ್ ಸುರಕ್ಷತಾ ಕಿಟ್ಗಳನ್ನು ಜಿಲ್ಲಾಡಳಿತದ ಮೂಲಕ ಪೂರೈಸಲು ಆಯೋಗದಿಂದ ಕ್ರಮ ಕೈಗೊಳ್ಳಲಾಗಿದೆ.
ಮತದಾರರು ಭೌತಿಕ ಅಂತರ ಕಾಯ್ದುಕೊಂಡು ಹಾಗೂ ಮುಕ್ತವಾಗಿ ಮತದಾನ ನಡೆಸುವ ನಿಟ್ಟಿನಲ್ಲಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡುವ ದೃಷ್ಟಿಯಿಂದ ಭಾರತ ಸಂವಿಧಾನದಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮತದಾನದ ಸಮಯಾವಧಿಯನ್ನು ಒಂದು ಗಂಟೆ ವಿಸ್ತರಿಸಿ, ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ವಿಸ್ತರಿಸಿ ಆ.23 ರಂದು ರಾಜ್ಯ ಚುನಾವಣಾ ಆಯೋಗದಿಂದ ಆದೇಶಿಸಲಾಗಿದ್ದು, ಇಂದು (ಆ.26) ಈ ಕುರಿತು ಅಧಿಕೃತ ಆದೇಶವನ್ನು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ನೀಡಿದ್ದು, ಮತದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.