ರಾಜ್ಯ

ಧಾರವಾಡ ಜಲಮಂಡಳಿ ಗುತ್ತಿಗೆ ಕಾರ್ಮಿಕರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂದ ದೀಪಕ ಚಿಂಚೋರೆ.

ಧಾರವಾಡ ಪ್ರಜಾಕಿರಣ.ಕಾಮ್ :  ಜಲಮಂಡಳಿ ಗುತ್ತಿಗೆ ಕಾರ್ಮಿಕರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ. ಕಳೆದ ಆರು ತಿಂಗಳಿಂದ ಸಂಬಳ ನೀಡದೆ ಸತಾಯಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದೀಪಕ್ ಚುಂಚೋರೆ ಆರೋಪಿಸಿದರು.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜನರಿಗೆ ಕುಡಿಯುವ ನೀರಿನ ಅನಾನುಕೂಲ ಸೃಷ್ಟಿ ಆಗಬಾರದು ಎಂಬ ಕಾರಣಕ್ಕೆ ಪ್ರತಿಭಟನೆ ಹಿಂಪಡೆಯಲಾಗಿತ್ತು. ನಮ್ಮ ಪ್ರತಿಭಟನೆ ವೇಳೆ ಆಗಿನ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರು ನೀಡಿದ ಭರವಸೆ ಇನ್ನೂ ಈಡೇರಿಲ್ಲ ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು ಇಲ್ಲವೇ ಮುಂದಿನ ದಿನಗಳಲ್ಲಿ ಮತ್ತೆ ಹೋರಾಟ ಆರಂಭ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಎಲ್ ಆಂಡ್ ಟಿ ಕಂಪೆನಿಗೆ ಜಲಮಂಡಳಿ ನೀರು ಪೂರೈಕೆ ಮಾಡಲು ಜವಾಬ್ದಾರಿ ವಹಿಸಲಾಗಿದೆ. ಇದಾದ ನಂತರ ಗುತ್ತಿಗೆ ಕಾರ್ಮಿಕರಿಗೆ ಯಾವುದೇ ವೇತನ ನೀಡುತ್ತಿಲ್ಲ. ಅವರಿಗೆ ಜೀವನ ನಡೆಸಲು ಕಷ್ಟವಾಗುತ್ತಿದ್ದು. ಕೂಡಲೇ ಅವರಿಗೆ ವೇತನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ವಸಂತ ಅರ್ಕಾಚಾರಿ ಸೇರಿದಂತೆ ಹಲವರು ಇದ್ದರು. ‌

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *