ಧಾರವಾಡ prajakiran.com : ಶುಕ್ರವಾರ ಸಂಹೆ 7 ,ಗಂಟೆಯಿಂದ ಸೋಮವಾರ ಬೆಳಗಿನ ಜಾವ 6 ಗಂಟೆಯವರೆಗೆ ಜೂನ್ 21ರ ವರೆಗೆ ವಾರ್ಯಾಂತ್ಯ ಲಾಕ್ ಡೌನ್ ಮುಂದುವರೆಯಲಿದೆ.
ಅಲ್ಲದೆ, ಇಂದಿನಿಂದ ಸೋಮವಾರ ಬೆಳಗಿನ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಇರಲಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿಗಳ ಆದೇಶದಂತೆ ಕಿರಾಣಿ, ಹಾಲು, ಹಣ್ಣು, ತರಕಾರಿ, ಮೊಂಸದ ಅಂಗಡಿ, ಮೆಡಿಕಲ್ ಸೇರಿದಂತೆ ಅಗತ್ಯ ಸೇವೆ ಹೊರತು ಪಡಿಸಿ ಉಳಿದಂತೆ ಎಲ್ಲವೂ ಬಂದ್ ಇರಲಿವೆ.
ಕೈಗಾರಿಕಾ ಶೇ.50 ರಷ್ಟು ಸಿಬ್ಬಂದಿಗೆ ಅವಕಾಶವಿದೆ. ಜೊತೆಗೆ ಕಟ್ಟಡ ಕಾರ್ಮಿಕರಿಗೆ ಅವಕಾಶ ನೀಡಲಾಗಿದೆ. ಹಾಗೂ ಪಾರ್ಕ್ ಬೆಳಗಿನ 5 ಗಂಟೆಯಿಂದ 10 ಗಂಟೆಯವರೆಗೆ ವಾಕಿಂಗ್ ಕಲ್ಪಿಸಲಾಗಿದೆ.
ಆಟೋ, ಮಾಕ್ಸಿ ಕ್ಯಾಬ್, ಸರಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಣೆ ಮಾಡಲು ಅನುಮತಿ ನೀಡಲಾಗಿದೆ ಎಂದು ಅವರು ವಿವರಿಸಿದರು.
ಪ್ರಮುಖವಾದ ಅಂಶಗಳನ್ನ ಹೊರತುಪಡಿಸಿ, ಕೆಲವು ಮಾರ್ಪಾಡುಗಳನ್ನ ಮಾಡಲಾಗಿದೆ. ಕರ್ಪ್ಯೂ ಸಮಯದಲ್ಲಿ ಕಾನೂನು ಉಲ್ಲಂಘನೆ ಮಾಡಿದರೇ, ಕ್ರಮವನ್ನ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.