ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಕಿರಾಣಿ, ಅಗತ್ಯ ಸೇವೆ ಹೊರತು ಪಡಿಸಿ ವಾರಂತ್ಯ ಕರ್ಫ್ಯೂ ಲಾಕ್ಡೌನ್ ಅನ್ವಯ

ಧಾರವಾಡ prajakiran.com : ಶುಕ್ರವಾರ ಸಂಹೆ 7 ,ಗಂಟೆಯಿಂದ ಸೋಮವಾರ ಬೆಳಗಿನ ಜಾವ 6 ಗಂಟೆಯವರೆಗೆ ಜೂನ್ 21ರ ವರೆಗೆ ವಾರ್ಯಾಂತ್ಯ ಲಾಕ್ ಡೌನ್ ಮುಂದುವರೆಯಲಿದೆ.

ಅಲ್ಲದೆ, ಇಂದಿನಿಂದ ಸೋಮವಾರ ಬೆಳಗಿನ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಇರಲಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿಗಳ ಆದೇಶದಂತೆ ಕಿರಾಣಿ, ಹಾಲು, ಹಣ್ಣು, ತರಕಾರಿ, ಮೊಂಸದ ಅಂಗಡಿ, ಮೆಡಿಕಲ್ ಸೇರಿದಂತೆ ಅಗತ್ಯ ಸೇವೆ ಹೊರತು ಪಡಿಸಿ ಉಳಿದಂತೆ ಎಲ್ಲವೂ ಬಂದ್ ಇರಲಿವೆ.

ಕೈಗಾರಿಕಾ ಶೇ.50 ರಷ್ಟು ಸಿಬ್ಬಂದಿಗೆ ಅವಕಾಶವಿದೆ. ಜೊತೆಗೆ ಕಟ್ಟಡ ಕಾರ್ಮಿಕರಿಗೆ ಅವಕಾಶ ನೀಡಲಾಗಿದೆ. ಹಾಗೂ ಪಾರ್ಕ್ ಬೆಳಗಿನ 5 ಗಂಟೆಯಿಂದ 10 ಗಂಟೆಯವರೆಗೆ ವಾಕಿಂಗ್ ಕಲ್ಪಿಸಲಾಗಿದೆ.

ಆಟೋ, ಮಾಕ್ಸಿ ಕ್ಯಾಬ್, ಸರಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಣೆ ಮಾಡಲು ಅನುಮತಿ ನೀಡಲಾಗಿದೆ ಎಂದು ಅವರು ವಿವರಿಸಿದರು.

ಪ್ರಮುಖವಾದ ಅಂಶಗಳನ್ನ ಹೊರತುಪಡಿಸಿ, ಕೆಲವು ಮಾರ್ಪಾಡುಗಳನ್ನ ಮಾಡಲಾಗಿದೆ. ಕರ್ಪ್ಯೂ ಸಮಯದಲ್ಲಿ ಕಾನೂನು ಉಲ್ಲಂಘನೆ ಮಾಡಿದರೇ, ಕ್ರಮವನ್ನ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *