ವಾರಾಂತ್ಯದ ಕರ್ಫ್ಯೂ ಜಾರಿಗೆ ಬಿಗಿ ಕ್ರಮ
ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭಾಗಶಃ ಲಾಕ್ಡೌನ್ ಮುಂದುವರಿದಿದೆ.
ಈ ಹಿನ್ನೆಲೆಯಲ್ಲಿ ಜೂ. 26, ಹಾಗೂ 27ರಂದು ಅಂದರೆ ನಾಳೆ ಹಾಗೂ ನಾಡಿದ್ದು ವಾರಾಂತ್ಯದ ಕರ್ಫ್ಯೂ ಜಾರಿಗೆ ಬಿಗಿಯಾದ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.
ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ.
ಶನಿವಾರ ಮತ್ತು ಭಾನುವಾರ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಮಾರಾಟ,ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಅದರಂತೆ ಹೋಟೆಲ್ , ರೆಸ್ಟೋರೆಂಟ್ಗಳಲ್ಲಿ ಪಾರ್ಸಲ್ ವ್ಯವಸ್ಥೆಗೆ ಮಾತ್ರ ಅವಕಾಶವಿದೆ . ದಿನಸಿ ಅಂಗಡಿ , ಹಣ್ಣು , ತರಕಾರಿ , ಮಾಂಸ , ಮೀನು , ಡೈರಿ , ಬೀದಿಬದಿ ವ್ಯಾಪಾರ , ಹಾಲಿನ ಬೂತ್ , ಜಾನುವಾರುಗಳ ಮೇವು ಮಾರಾಟ ಕೇಂದ್ರಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯನಿರ್ವಹಿಸಬಹುದು ಎಂದು ಅವರು ತಿಳಿಸಿದ್ದಾರೆ.
ಇನ್ನುಳಿದಂತೆ ಎಲ್ಲವೂ ಸ್ಥಬ್ದವಾಗಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರ ಅನಗತ್ಯ ಓಡಾಟ ವನ್ನು ನಿರ್ಬಂಧಿಸಲಾಗಿದೆ.
ಅನಗತ್ಯವಾಗಿ ಸಂಚಾರ ಮಾಡುವವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ತುರ್ತು ಮತ್ತು ಅಗತ್ಯ ಸೇವೆ ಒದಗಿಸುವ ಕೈಗಾರಿಕೆ, ಕಂಪನಿ , ಸಂಸ್ಥೆಗಳ ಕಾರ್ಯಾಚರಣೆಗೆ ಅನುಮತಿ ಇದೆ
ನ್ಯಾಯಬೆಲೆ ಅಂಗಡಿ , ಮದ್ಯದ ಅಂಗಡಿ ಪಾರ್ಸೆಲ್ ವ್ಯವಸ್ಥೆಯೊಂದಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ತೆರೆಯಬಹುದು . ಬಸ್ , ರೈಲು , ವಿಮಾನ ಕಾರ್ಯಾಚರಣೆ ವಾರಾಂತ್ಯದ ಕರ್ಪ್ಯೂ ಅವಧಿಯಲ್ಲಿ ಮುಂದುವರಿಯಲಿದೆ,
ರೋಗಿಗಳು ಹಾಗೂ ಅವರನ್ನು ನೋಡಿಕೊಳ್ಳುವವರ ಸಂಚಾರಕ್ಕೆ ನಿರ್ಬಂಧವಿಲ್ಲ. ಅಂತಹವರು ಅಧಿಕೃತ ವೈದ್ಯಕೀಯ ದಾಖಲಾತಿಗಳನ್ನು ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ