dharwad dc order
ಜಿಲ್ಲೆ

ಧಾರವಾಡ ಜಿಲ್ಲೆಯಾದ್ಯಂತ ಜೂ.26, 27ರಂದು ಕೇವಲ ಮಧ್ಯಾಹ್ನ‌ 2 ಗಂಟೆಯವರೆಗೆ ಅಗತ್ಯ ಸೇವೆಗೆ ಅವಕಾಶ….!

ವಾರಾಂತ್ಯದ ಕರ್ಫ್ಯೂ ಜಾರಿಗೆ ಬಿಗಿ ಕ್ರಮ

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭಾಗಶಃ ಲಾಕ್‌ಡೌನ್ ಮುಂದುವರಿದಿದೆ‌.

ಈ ಹಿನ್ನೆಲೆಯಲ್ಲಿ ಜೂ. 26, ಹಾಗೂ 27ರಂದು ಅಂದರೆ ನಾಳೆ ಹಾಗೂ ನಾಡಿದ್ದು ವಾರಾಂತ್ಯದ ಕರ್ಫ್ಯೂ ಜಾರಿಗೆ ಬಿಗಿಯಾದ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ.

ಶನಿವಾರ ಮತ್ತು ಭಾನುವಾರ ಬೆಳಿಗ್ಗೆ 6 ರಿಂದ ಮಧ್ಯಾಹ್ನ‌ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಮಾರಾಟ,ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಅದರಂತೆ ಹೋಟೆಲ್ , ರೆಸ್ಟೋರೆಂಟ್‌ಗಳಲ್ಲಿ ಪಾರ್ಸಲ್ ವ್ಯವಸ್ಥೆಗೆ ಮಾತ್ರ ಅವಕಾಶವಿದೆ . ದಿನಸಿ ಅಂಗಡಿ , ಹಣ್ಣು , ತರಕಾರಿ , ಮಾಂಸ , ಮೀನು , ಡೈರಿ , ಬೀದಿಬದಿ ವ್ಯಾಪಾರ , ಹಾಲಿನ ಬೂತ್ , ಜಾನುವಾರುಗಳ ಮೇವು ಮಾರಾಟ ಕೇಂದ್ರಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯನಿರ್ವಹಿಸಬಹುದು ಎಂದು ಅವರು ತಿಳಿಸಿದ್ದಾರೆ.

 

ಇನ್ನುಳಿದಂತೆ ಎಲ್ಲವೂ ಸ್ಥಬ್ದವಾಗಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರ ಅನಗತ್ಯ ಓಡಾಟ ವನ್ನು ನಿರ್ಬಂಧಿಸಲಾಗಿದೆ.

ಅನಗತ್ಯವಾಗಿ ಸಂಚಾರ ಮಾಡುವವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ತುರ್ತು ಮತ್ತು ಅಗತ್ಯ ಸೇವೆ ಒದಗಿಸುವ ಕೈಗಾರಿಕೆ, ಕಂಪನಿ , ಸಂಸ್ಥೆಗಳ ಕಾರ್ಯಾಚರಣೆಗೆ ಅನುಮತಿ ಇದೆ

ನ್ಯಾಯಬೆಲೆ ಅಂಗಡಿ , ಮದ್ಯದ ಅಂಗಡಿ ಪಾರ್ಸೆಲ್ ವ್ಯವಸ್ಥೆಯೊಂದಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ತೆರೆಯಬಹುದು . ಬಸ್ , ರೈಲು , ವಿಮಾನ ಕಾರ್ಯಾಚರಣೆ ವಾರಾಂತ್ಯದ ಕರ್ಪ್ಯೂ ಅವಧಿಯಲ್ಲಿ ಮುಂದುವರಿಯಲಿದೆ,

ರೋಗಿಗಳು ಹಾಗೂ ಅವರನ್ನು ನೋಡಿಕೊಳ್ಳುವವರ ಸಂಚಾರಕ್ಕೆ ನಿರ್ಬಂಧವಿಲ್ಲ. ಅಂತಹವರು ಅಧಿಕೃತ ವೈದ್ಯಕೀಯ ದಾಖಲಾತಿಗಳನ್ನು ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *