ಧಾರವಾಡ prajakiran.com : ಅಕ್ಟೋಬರ್ ೨೮ ರಂದು ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನದ ಹಿನ್ನಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥಿತ ಚುನಾವಣೆ ನಡೆಸುವ ಉದ್ದೇಶದಿಂದ ಅಕ್ಟೋಬರ್ ೨೭ರ ಸಂಜೆ ೫ ಗಂಟೆಯಿಂದ ಅಕ್ಟೋಬರ್ ೨೮ರ ಸಂಜೆ ೫ ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ಸ್ಕ್ಯಾನಿಂಗ್, ಝರಾಕ್ಸ್ ಹಾಗೂ ಕಂಪ್ಯೂಟರ್ ಸೆಂಟರ್ಗಳನ್ನು ಚುನಾವಣಾ ಅವಧಿಯಲ್ಲಿ ಕಾರ್ಯನಿರ್ವಹಿಸದಂತೆ ನಿರ್ಬಂಧಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಪ್ರಜಾ ಪ್ರತಿನಿಧಿ ಕಾಯ್ದೆ ೧೯೫೧ರ ಅನ್ವಯ ಈ ಆದೇಶ ಹೊರಡಿಸಲಾಗಿದೆ. ಆದೇಶ ಉಲ್ಲಂಘಿಸುವ ಇಂತಹ ಕೇಂದ್ರಗಳ ಮಾಲಿಕರು ಯಾವುದೇ ಪರಿಹಾರಕ್ಕೆ ಅರ್ಹರಾಗಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.