ಧಾರವಾಡ Prajakiran.com : ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಸರ್ಕಾರ ನೀಡಿದೆ.
ಅದರಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಲವಾರು ಯೋಜನೆ ರೂಪಿಸಿದೆ ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಹಿಳಾ ಅಭಿವೃದ್ಧಿ ನಿರೀಕ್ಷಕರಾದ ನಂದಿನಿ ಕುಂಬಾರ ಹೇಳಿದರು.
ಧಾರವಾಡದ ಪತ್ರೇಶ್ವರ ನಗರದಲ್ಲಿ ಪ್ರಮಿಳಾ ಕೌಶಲ್ಯ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ಮಹಿಳೆಯರು ಕೌಶಲ್ಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಲವು ಸೌಲಭ್ಯಗಳನ್ನು ಒದಗಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಇಲಾಖೆ ಸಾಲ ಯೋಜನೆ ರೂಪಿಸಿ ಜಾರಿಗೆ ತಂದಿದೆ ಎಂದರು.
ಪ್ರಮಿಳಾ ಕೌಶಲ್ಯ ಅಭಿವೃದ್ಧಿ ಸಂಸ್ಥೆ ಮುಖ್ಯಸ್ಥರಾದ ಪ್ರೀಯಾ ಚಂದ್ರಕಾಂತ ಖೋದಾನಪುರ ಮಾತನಾಡಿ, ಮಹಿಳೆಯರಿಗೆ ಸರ್ಕಾರ ಸೌಲಭ್ಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿ.ಟಿ. ಶೋಭಾ, ಮಂಜುಳಾ ಬಿ.ಆರ್, ಕಲಾವತಿ ತಾತೋಸ್ಕರ್, ಗೌರವ್ವ ಕಂಮತಿ, ಶೈಲಾ ಹುನಸಗಿ, ಮಾಲಾ ಮನಗುಂಡಿ, ಸಂಗೀತಾ ಹೂಗಾರ, ಶಿಲ್ಪಾ ಜಟ್ಟಣ್ಣವರ ಸೇರಿದಂತೆ ಪತ್ರೇಶ್ವರ ನಗರ, ಮೃತ್ಯುಂಜಯ ನಗರ, ಕಮಲಾಪುರ, ಸೇರಿದಂತೆ ವಿವಿಧ ಬಡಾವಣೆಗಳ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.