ಆಗ್ರಾ prajakiran.com : ಮಹಿಳೆಯೊಬ್ಬಳು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು, ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದ ವಿದ್ಯಾಪುರದಲ್ಲಿ ನಡೆದಿದೆ.
ಮೃತ ದುರ್ದೈವಿ ಮೋನಾ ದ್ವಿವೇದಿ ಗುಂಡು ಹಾರಿಸಿಕೊಳ್ಳುವುದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಭಾರತದಲ್ಲಿ ಹೆಣ್ಣಿನ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ತಡೆಯುವಂತೆ ಮನವಿ ಮಾಡಿದ್ದಾರೆ.
ಪತ್ರದಲ್ಲಿ ಮೋನಾ ದ್ವಿವೇದಿ,
“ನಾನು ಬಡ ಕುಟುಂಬದಿಂದ ಬಂದವಳು. ಚಿಕ್ಕವಳಿದ್ದಾಗಲೇ ನನ್ನ ತಾಯಿ ತೀರಿಕೊಂಡರು.
ತಂದೆ ಕುಡುಕ. ನನ್ನ ಪತಿಯ ಸಹೋದರರಾದ ಪಂಕಜ್, ಅಂಬುಜ್ ನಾನು ಬಡ ಕುಟುಂಬದಿಂದ ಬಂದಿದ್ದೇನೆಂಬ ಕಾರಣಕ್ಕೆ ನನ್ನ ಮೇಲೆ ದೈಹಿಕ ಹಲ್ಲೆ ಮಾಡುತ್ತಿದ್ದರು.
ನನ್ನ ಅತ್ತೆ, ಮಾವ ಕೂಡ ನನಗೆ ಚಿತ್ರಹಿಂಸೆ ಕೊಡುತ್ತಾರೆ. ನನ್ನ ಪತಿ ಮನೆಯಿಂದ ಹೊರದಬ್ಬುತ್ತಾರೆಂಬ ಭಯಕ್ಕೆ ಇವೆಲ್ಲವನ್ನೂ ಸಹಿಸಿಕೊಂಡಿದ್ದೆ” ಎಂದು ಬರದುಕೊಂಡಿದ್ದಾರೆ.