ರಾಜ್ಯ

ಯಾದಗಿರಿಗೆ ಜಿಲ್ಲೆಗೆ ಮತ್ತೆ ಪ್ರವಾಹದ ಭೀತಿ

ಕೃಷ್ಣಾ ನದಿಗೆ 2.20.620 ಲಕ್ಷ ಕ್ಯೂಸೆಕ್ಸ್  ನೀರು

ಯಾದಗಿರಿ prajakiran.com : ಮಹಾರಾಷ್ಟ್ರದ ಕೊಯ್ನಾ, ಸಾಂಗ್ಲಿ ಸೇರಿದಂತೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ  ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಕೃಷ್ಣೆಯ ಒಡಲು ಸದ್ಯ ಭರ್ತಿಯಾಗಿದೆ.

ಆಲಮಟ್ಟಿ ಜಲಾಶಯದಿಂದ  ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಜಿಲ್ಲೆಯ ಜನರಿಗೆ ಈಗ ಪ್ರವಾಹದ ಭೀತಿ ಎದುರಾಗಿದೆ.

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.20. 620ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ನೀರಿನ ಪ್ರಮಾಣ ಇನ್ನೂ  ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಸಮೀಪವಿರುವ ಬಸವಸಾಗರ ಜಲಾಶಯ 492.25 ಮೀಟರ್ ಗರಿಷ್ಠ ಸಾಮರ್ಥ್ಯ ಹೊಂದಿದ್ದು, 33.31 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ.

ಸದ್ಯಕ್ಕೆ ಬಸವಸಾಗರ ಜಲಾಶಯದಲ್ಲಿ ಒಳಹರಿವು ಹೆಚ್ಚಳವಾದ ಹಿನ್ನೆಲೆ 491.42 ಮೀಟರ್ ನೀರು ಸಂಗ್ರಹವಾಗಿದ್ದು, 29.57 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ.

ಮಹಾರಾಷ್ಟ್ರ ಸೇರಿದಂತೆ ಹಲವು ಪ್ರದೇಶಗಳಲ್ಲಿ  ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯದಿಂದ ಒಟ್ಟು 25 ಕ್ರಸ್ಟ್ ಗೇಟ್ ಗಳ ಮೂಲಕ ನೀರು ಹೊರಬಿಡಲಾಗಿದೆ.

, ಬಸವಸಾಗರ ಜಲಾಶಯಕ್ಕೆ ಈಗ 2.20 ಸಾವಿರ ಕ್ಯೂಸೆಕ್ ಒಳಹರಿವಿದ್ದು, ಶನಿವಾರ ಬೆಳಗ್ಗೆ 22 ಕ್ರಸ್ಟ್ ಗೇಟ್​ಗಳ ಮೂಲಕ 2 ಲಕ್ಷ 20 ಸಾವಿರದ 620ಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಹರಿಬೀಡಲಾಗುತ್ತಿದೆ.

 ಜಲಾಶಯದ ಒಳಹರಿವು ಹೆಚ್ಚಾದರೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುವುದು ಎಂದು ಕೃಷ್ಣಾ ಭಾಗ್ಯ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಾಗಾಗಿ ಜನರು ತಮ್ಮ ಜಾನುವಾರುಗಳ ಸಹಿತ ಸುರಕ್ಷಿತ ಸ್ಥಳಕ್ಕೆ ತೆರಳುವುದರ ಜೊತೆಗೆ ಕೃಷ್ಣಾ ನದಿ ಪಾತ್ರಕ್ಕೆ ತೆರಳದಂತೆ ಸೂಚನೆ ನೀಡಿದ್ದಾರೆ.

ಸದ್ಯಕ್ಕೆ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.20.620 ಸಾವಿರ ಕ್ಯೂಸೆಕ್ ಹಾಗೂ ಇನ್ನೂ ಅಧಿಕ ಪ್ರಮಾಣದ  ನೀರು ಬಿಟ್ಟರೆ ತೀರಾ ಪ್ರಮಾಣದ ಸಮಸ್ಯೆಯಾಗಲಿದೆ

 ನೀರಿನ ಪ್ರಮಾಣ ಹೆಚ್ಚಾದರೆ ನದಿ ಪಾತ್ರದ ಜನರು ಮತ್ತೆ 2009ರ ಮತ್ತು 2019ರ ಪ್ರವಾಹ ರೀತಿಯಲ್ಲಿ ಸಂಕಷ್ಟ ಎದುರಿಸುವ ಸಾಧ್ಯತೆಗಳಿವೆ.

ಸದ್ಯ ಹುಣಸಗಿ ತಾಲೂಕಿನ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಛಾಯಾ ಭಗವತಿ ದೇವಸ್ಥಾನ ವು ಸಂಪೂರ್ಣ ಜಲಾವೃತವಾಗಿದ್ದು . ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ

ಜಿಲ್ಲೆಯ ಸುರಪುರ, ಶಹಪುರ, ಹುಣಸಗಿ, ಹಾಗೂ ವಡಗೇರಾ ತಾಲೂಕಿನಲ್ಲಿ  ಕಾಳಜಿ ಕೇಂದ್ರಗಳನ್ನು ಗುರುತಿಸುವ ಮೂಲಕ ಮುಂಜಾಗ್ರತಾ ಕ್ರಮ ಕೈಗೊಂಡಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದ್ದಾರೆ. 

ವರದಿ :  ರಾಘವೇಂದ್ರ ಮಾಸ್ತರ,ಯಾದಗಿರಿ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *