ಧಾರವಾಡ prajakiran.com : ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಧಾರವಾಡದ ಯರಿಕೊಪ್ಪ ಬಳಿ ಅಪಘಾತ ಸಂಭವಿಸಿದೆ.
ಇದರಿಂದಾಗಿ ಸ್ಥಳದಲ್ಲೇ ನಿವೃತ್ತ ಯೋಧ ಒಬ್ಬರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಯರಿಕೊಪ್ಪದ ಬಳಿ ನಡೆದ ಅಪಘಾತದಿಂದ ಕೆಲಕಾಲ ಬೈಪಾಸ್ ನಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಮಾಹಿತಿ ಅರಿತು ಘಟನಾ ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಸಂಚಾರಿ ಪೊಲೀಸರು ಹಾಗೂ ಗ್ರಾಮೀಣ ಪೋಲಿಸರು ವಾಹನಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ.
ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಕಲೆ ಹಾಕಿದ್ದಾರೆ.