ಧಾರವಾಡ prajakiran.com : ವಿದ್ಯಾನಗರಿ ಧಾರವಾಡದಲ್ಲಿ ಯುವಕನೊಬ್ಬನ ಮೇಲೆ ಪುಂಡರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ ಘಟನೆ ನಡೆದಿದೆ.
ಯುವಕನೊಬ್ಬನ ಮೇಲೆ ಮತ್ತೊಂದು ಯುವಕರ ಗುಂಪೊಂದು ಹಲ್ಲೆ ಮಾಡಿದ ಘಟನೆ ಇಲ್ಲಿನ ಲಕ್ಷ್ಮಿಸಿಂಗನಕೇರಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಶಿವು ಲಮಾಣಿ ಎಂಬ ಯುವಕನ ಮೇಲೆ ನಾಲ್ಕೈದು ಜನರ ತಂಡವೊಂದು ಏಕಾಏಕಿ ರಾಡ್ ಹಾಗೂ ಬಡಿಗೆಗಳಿಂದ ಹಲ್ಲೆ ಮಾಡಿದೆ.
ಇದರಿಂದ ಶಿವು ಎಂಬ ಯುವಕನಿಗೆ ತಲೆ, ಕೈ ಹಾಗೂ ಕಾಲಿನ ಭಾಗಗಳಿಗೆ ಪೆಟ್ಟಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಯುವಕನನ್ನು ಮತ್ತೊಂದು ಯುವಕರ ಗುಂಪು ಹೊಡೆಯುತ್ತಿದ್ದಾಗ ಆ ಯುವಕ ಸಾಕಿದ ನಾಯಿ, ಹಲ್ಲೆ ಮಾಡುವವರ ಮೇಲೆ ದಾಳಿ ಮಾಡಿ ತನ್ನ ಮಾಲೀಕನನ್ನು ಬಿಡಿಸಲು ಪ್ರಯತ್ನಿಸಿದೆ. ಆದರೆ, ಆ ನಾಯಿ ಮೇಲೂ ಯುವಕರ ಗುಂಪು ಹಲ್ಲೆ ಮಾಡಿ ಪರಾರಿಯಾಗಿದೆ.
ಈ ಸಂಬಂಧ ಹಲ್ಲೆಗೊಳಗಾದ ಶಿವು ಲಮಾಣಿ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ನಾಲ್ಕೈದು ಜನರ ಮೇಲೆ ದೂರು ದಾಖಲಿಸಿದ್ದಾರೆ.