ರಾಜ್ಯ

ಸಿಎಂ ತವರು ಜಿಲ್ಲೆಯಲ್ಲಿ ವೆಂಟಿಲೇಟರ್ ಸಿಗದೆ ಎರಡು ಗಂಟೆ ಒದ್ದಾಡಿ ಸೋಂಕಿತ ಸಾವು…..

ಶಿವಮೊಗ್ಗ prajakiran.com : ರಾಜ್ಯದಲ್ಲಿ ಕೊರೋನಾ ಸೋಂಕಿತರಿಗೆ ವೆಂಟಿಲೇಟರ್ ಸಮಸ್ಯೆ ಮತ್ತೆ ಮುಂದುವರಿದಿದ್ದು, ಇಲ್ಲಿನ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತನೋರ್ವ ವೆಂಟಿಲೇಟರ್ ಸಿಗದೆ ಒದ್ದಾಡಿ ಸಾವನ್ನಪ್ಪಿದ ಘಟನೆ ನಡೆದಿದೆ.

ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಶಿಕಾರಿಪುರದ ಆನಂದ್ ಎಂಬಾತನೇ ಮೃತಪಟ್ಟ ಸೋಂಕಿತ.

ಶನಿವಾರ ಮಧ್ಯಾರಾತ್ರಿ ವೇಳೆಗೆ ಆನಂದ್ ಗೆ ಉಸಿರಾಟದ ಸಮಸ್ಯೆ ಆರಂಭವಾಗಿತ್ತು.

ಆದರೆ ಎಷ್ಟೇ ಪ್ರಯತ್ನಪಟ್ಟರೂ ವೆಂಟಿಲೇಟರ್ ಸಿಕ್ಕಿರಲಿಲ್ಲ.

ಸೋಂಕಿತ ಆನಂದ್ ಸುಮಾರು ಎರಡು ಗಂಟೆಗಳ ಕಾಲ ಒದ್ದಾಡಿ ಸಾವನ್ನಪ್ಪಿದ್ದಾರೆ.

ಅಚ್ಚರಿ ಹಾಗೂ ದುರಂತದ ಸಂಗತಿಯೆಂದರೆ ಇತ ಸಿಎಂ ಯಡಿಯೂರಪ್ಪ ಅವರು ಪ್ರತಿನಿಧಿಸುವ ತವರು ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಯುವಕ.

ಸಿಎಂ ಜಿಲ್ಲೆಯ ಜನರ ಹಣೆಬರಹ ನೋಡಿ ನಾಡಿನ ಜನತೆ ಮರುಕಪಡುವಂತಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *