ಅಪರಾಧ

ಪ್ರವಾಸಕ್ಕೆ ಕರೆದುಕೊಂಡು ಹೋಗದಕ್ಕೆ ಯುವತಿ ಆತ್ಮಹತ್ಯೆ

ಹುಬ್ಬಳ್ಳಿ prajakiran.com : ತಾಯಿ ಪ್ರವಾಸಕ್ಕೆ ಕರೆದುಕೊಂಡು ಹೋಗದಕ್ಕೆ ಮನನೊಂದ ಯುವತಿಯೊಬ್ಬಳ್ಳು ಮನೆಯ ಎರಡನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಎಲಿಪೇಟೆ ಹೂಗಾರ ಓಣಿಯ ಲವಿಶಾ ರಾಜೇಶ ಬೋಹಾರಾ (19) ಎಂಬ ಯುವತಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗುರುತಿಸಲಾಗಿದೆ.

ನಗರದ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಲವಿಶಾ ಪ್ರವಾಸಕ್ಕೆ ಹಠ ಹಿಡಿದಿದ್ದಳು. ಆದರೆ, ಲಾಕ್ ಡೌನ್ ನಿಂದಾಗಿ ಸಾಧ್ಯವಾಗಿರಲಿಲ್ಲ. ನಂತರ ಹೋಗೋಣ ಎಂದು ಸಮಾಧಾನ ಪಡಿಸಿದ್ದರು.

ಆದರೆ ಲಾಕ್ ಡೌನ್ ಸಡಲಿಕೆ ಬಳಿಕ ಮತ್ತೆ ಪಟ್ಟು ಹಿಡಿದಿದ್ದಳು. ಸದ್ಯ ಬೇಡ ಎಂದು ಹೇಳಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಲವಿಶಾ ತಾಯಿ ಹೇಮಲತಾ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *