ರಾಜ್ಯ

ಮಾಜಿ ಸಚಿವ ರಮೇಶ ಜಾರಕಿಹೊಳಿ ನೌಕರಿ ಕೊಡಿಸುವುದಾಗಿ ಮೋಸ : ಯುವತಿ ವೀಡಿಯೋ ವೈರಲ್

ಬೆಂಗಳೂರು prajakiran.com : ಮಾಜಿ ಸಚಿವ ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿರುವ ಯುವತಿ ಮೊದಲ ಬಾರಿಗೆ ವೀಡಿಯೋ ಸಂದೇಶ ರವಾನಿಸಿ ರಕ್ಷಣೆ ಕೋರಿದ್ದಾಳೆ.

ವೀಡಿಯೋ ವಿವರ :
ಸಂತ್ರಸ್ತ ಯುವತಿಯೇ ಈ ಸಿಡಿ ಬಿಡುಗಡೆ ಮಾಡಿ ರಕ್ಷಣೆ ಕೋರಿದ್ದಾರೆ.

ನನಗೆ ಕೆಲಸ ಕೊಡಿಸುವುದಾಗಿ ಹೇಳಿ ರಮೇಶ ಜಾರಕಿಹೊಳಿಯೇ ನನ್ನ ಮಾನ ಹರಾಜು ಹಾಕಿದ್ದಾರೆ ಎಂದು ಗೃಹ ಸಚಿವರಿಗೆ ಮನವಿ ಮಾಡಿದ್ದಾಳೆ.

ನನಗೆ ಯಾವುದೇ ರಾಜಕೀಯ ನಾಯಕರ ಸಂಪರ್ಕ ಇಲ್ಲ. ನನ್ನ ಮಾನ, ಮರ್ಯಾದೆ ಹರಾಜಾಗಿದೆ.

ನನ್ನ ತಂದೆ -ತಾಯಿ 2 ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ನಾನು ಕೂಡ ಎರಡು ಮೂರು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ.

ರಮೇಶ ಜಾರಕಿಹೊಳಿ ಕೆಲಸ ಕೊಡಿಸುವುದಾಗಿ ನನಗೆ ಮೋಸ ಮಾಡಿದ್ದಾರೆ. ಅವರೇ ಸಿಡಿ ಬಿಡುಗಡೆ ಮಾಡಿದ್ದಾರೆ. ಇದು ನಕಲಿ ವಿಡೀಯೋ ಅಲ್ಲ.

ಆದರೆ ಅದನ್ನು ಬಹಿರಂಗಪಡಿಸಿ ನನ್ನ ಮಾನ ಹರಾಜು ಹಾಕಿದ್ದಾರೆ ಎಂದು ಯುವತಿ ಹೇಳಿಕೆ ನೀಡಿದ್ದಾಳೆ.

ಕೆಲಸದ ನೆಪದಲ್ಲಿ ನನ್ನನ್ನು ನಂಬಿಸಿ ಮೋಸ ಮಾಡಿದ್ದಾರೆ ಎಂದು ದೂರಿದ್ದಾಳೆ.

ಯುವತಿಯ ಈ ಹೇಳಿಕೆಯಿಂದಾಗಿ ಇಡೀ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದಂತಾಗಿದೆ.

ಮಾಜಿ ಸಚಿವ ರಮೇಶ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ ಕೆಲವೇ ಗಂಟೆಗಳಲ್ಲಿ ವೀಡಿಯೋ ಬಾರಿ ವೈರಲ್ ಆಗಿದ್ದು, ರಾಜ್ಯದ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಆಕೆ ರಕ್ಷಣೆ ನಮ್ಮ ಹೊಣೆ‌. ಈ ಬಗ್ಗೆ ಬೆಂಗಳೂರು ನಗರದ ಪೊಲೀಸ್ ಆಯುಕ್ತರು ಹಾಗೂ ಡಿಜಿಪಿ ಜೊತೆಗೆ ಮಾತನಾಡಿದ್ದೇನೆ ಎಂದು ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ದಾರೆ.

ಇದರಿಂದಾಗಿ ಮಾಜಿ ರಮೇಶ್ ಜಾರಕಿಹೊಳಿ ವಿರುದ್ದ ಈಗಲಾದರೂ ಪ್ರಕರಣ ದಾಖಲಾಗುತ್ತದೆಯೇ ಇಲ್ಲವೇ ಎಂಬುದು ಕಾದು ನೋಡಬೇಕಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *