ಧಾರವಾಡ ಪ್ರಜಾಕಿರಣ.ಕಾಮ್ : ಕ್ರೀಡೆ ಬಿಟ್ಟು ಓದಿನ ಕಡೆಗೆ ಗಮನಕೊಡು ಎಂದು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಮಗನೊಬ್ಬ ತನ್ನ ಜೀವವನ್ನೇ ಕಳೆದುಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಸಾಧನಕೇರಿಯ ಚೇತನ ತೊಂಡಿಹಾಳ ಎಂಬ ಯುವಕನೇ ಕೆಲಗೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಫುಟ್ಬಾಲ್ನಲ್ಲಿ ಆಸಕ್ತಿ ಹೊಂದಿದ್ದ ಚೇತನಗೆ ಆತನ ತಂದೆ ಶರಣಪ್ಪ, ಬರೀ ಫುಟ್ಬಾಲ್ ಕಡೆ ಗಮನಹರಿಸಬೇಡ ಓದಿನ ಕಡೆಗೂ ಗಮನಹರಿಸು ಎಂದಿದ್ದ.
ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಚೇತನ ಕೆಲಗೇರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಳೆದ ಸೋಮವಾರ ಮನೆಯಿಂದ ಹೋಗಿದ್ದ ಚೇತನ್, ಇಂದು ಬೆಳಗಿನಜಾವ ಕೆಲಗೇರಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಮೃತ ದೇಹವನ್ನು ಹೊರತೆಗೆದು ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.