ಅಪರಾಧ

ಓದಿನ ಕಡೆ ಗಮನ ಕೊಡು ಎಂದಿದ್ದಕ್ಕೆ ಕೆರೆಗೆ ಹಾರಿದ ಮಗ…!

ಧಾರವಾಡ ಪ್ರಜಾಕಿರಣ.ಕಾಮ್ : ಕ್ರೀಡೆ ಬಿಟ್ಟು ಓದಿನ ಕಡೆಗೆ ಗಮನಕೊಡು ಎಂದು ಬುದ್ದಿವಾದ ಹೇಳಿದ್ದಕ್ಕೆ  ಮನನೊಂದು ಮಗನೊಬ್ಬ ತನ್ನ ಜೀವವನ್ನೇ ಕಳೆದುಕೊಂಡ ಘಟನೆ ಧಾರವಾಡದಲ್ಲಿ‌ ನಡೆದಿದೆ.

ಧಾರವಾಡದ ಸಾಧನಕೇರಿಯ ಚೇತನ ತೊಂಡಿಹಾಳ ಎಂಬ ಯುವಕನೇ ಕೆಲಗೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಫುಟ್ಬಾಲ್‌ನಲ್ಲಿ ಆಸಕ್ತಿ ಹೊಂದಿದ್ದ ಚೇತನಗೆ ಆತನ ತಂದೆ ಶರಣಪ್ಪ, ಬರೀ ಫುಟ್ಬಾಲ್ ಕಡೆ ಗಮನಹರಿಸಬೇಡ ಓದಿನ ಕಡೆಗೂ ಗಮನಹರಿಸು ಎಂದಿದ್ದ.

ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಚೇತನ ಕೆಲಗೇರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಳೆದ ಸೋಮವಾರ ಮನೆಯಿಂದ ಹೋಗಿದ್ದ ಚೇತನ್, ಇಂದು ಬೆಳಗಿನಜಾವ ಕೆಲಗೇರಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಮೃತ ದೇಹವನ್ನು ಹೊರತೆಗೆದು ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *