ಧಾರವಾಡ ಪ್ರಜಾಕಿರಣ.ಕಾಮ್ : ವಯಸ್ಸಾಗುತ್ತಾ ಬಂದರೂ ತನಗೆ ಮದುವೆಗೆ ಒಂದು ಕನ್ಯೆ ಸಿಗಲಿಲ್ಲ ಎಂದು ಬೇಸರಗೊಂಡ ಯುವಕನೊಬ್ಬ ಸ್ಮಶಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿಯಲ್ಲಿ ಶುಕ್ರವಾರ ನಡೆದಿದೆ.
ಸಂತೋಷ ಕೊರಡಿ ಎಂಬಾತನೇ ಹೀಗೆ ಯಡವಟ್ಟು ಮಾಡಿಕೊಂಡ ಯುವಕ.
ತೀವ್ರವಾಗಿ ಗಾಯಗೊಂಡಿರುವ ಆತನನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಕಿಯಿಂದಾಗಿ ದೇಹದ ಹಲವು ಭಾಗ ಸುಟ್ಟಿದ್ದು, ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.