ರಾಜ್ಯ

ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಇನ್ನಿಲ್ಲ

ಹುಬ್ಬಳ್ಳಿ prajakiran. com : ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾಗಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ (81) ಇಂದು ಮುಂಜಾನೆ ನಿಧನ ಹೊಂದಿದರು.

ಕಳೆದ ಐದಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

ಮೃತರು ಪತ್ನಿ, ಪುತ್ರ,ಆರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ವಿಧಾನ ಪರಿಷತ್ ಸದಸ್ಯರಾಗಿ, ಹುಬ್ಬಳ್ಳಿ ಶಹರ ವಿಧಾನ ಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರಲ್ಲದೆ,
ಧರ್ಮಸಿಂಗ್ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಹುಬ್ಬಳ್ಳಿ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ
ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *