ಹುಬ್ಬಳ್ಳಿ prajakiran.com ;
ಬಿಜೆಪಿಯವರು ಹಿಟ್ಲರ್ ನಂತೆ ವರ್ತನೆ ಮಾಡುತಿದ್ದಾರೆ.
ಬಿಜೆಪಿ ನಾಯಕರಿಗೆ ರೈತರು, ಜನಸಾಮಾನ್ಯರು, ವಿರೋಧ ಪಕ್ಷದವರು ಕಾಣುತಿಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಆರೋಪಿಸಿದರು.
ಅವರು ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಅವರು ಯಾರಿಗೂ ಬೆಲೆ ಕೊಡುತಿಲ್ಲ- ಸರ್ಕಾರದ ವೈಪಲ್ಯ ಕುರಿತು ಪ್ರತಿಭಟನೆ ಮಾಡಿದರು ಏನು ಪ್ರಯೋಜನವಿಲ್ಲದಂತಾಗಿದೆ ಎಂದು ಹೇಳಿದರು.
ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಯ ಹಣ ಬಿಡುಗಡೆ ಮಾಡುವಂತೆ ಹಲವು ಬಾರಿ ಪತ್ರ ಬರೆದರೂ ಪ್ರಯೋಜನವಾಗಿಲ್ಲ ಎಂದು ಕಿಡಿಕಾರಿದರು.
ಸಮ್ಮೀಶ್ರ ಸರ್ಕಾರದ ಅವಧಿಯಲ್ಲಿ ಬಿಡುಗಡೆಯಾದ ಅನುದಾನ ತಡೆಹಿಡಿಯಲಾಗಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಇಸ್ಮಾಯಿಲ್ ತಮಟಗಾರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.