ದಾವಣಗೆರೆ prajakiran.com :
ಡಿಸೆಂಬರ್ ವರೆಗೆ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯತ್ ಚುನಾವಣೆ ನಡೆಸದಿರಲು ನಿರ್ಧಾರ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ವಿವರಿಸಿದರು.
ಕೋವಿಡ್ ಕಾರಣಕ್ಕೆ ಸದ್ಯಕ್ಕೆ ಯಾವುದೇ ಚುನಾವಣೆಗಳನ್ನು ನಡೆಸದಿರಲು ತೀರ್ಮಾನಿಸಲಾಗಿದೆ ಎಂದರು.
ಕೊರೋನಾ ಎರಡನೇ ಅಲೆ ಸ್ವಲ್ಪಮಟ್ಟಿಗೆ ಇಳಿಕೆ ಕಂಡಿದೆ. ಆದರೆ ಮೂರನೇ ಅಲೆ ಭೀತಿ ಕೂಡ ಹಾಗೆಯೇ ಇದೆ ಎಂದು ಹೇಳಿದರು.
ಜೊತೆಗೆ ಸೋಮವಾರ ಸಂಜೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಕುರಿತು ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎಂದರು.
ಇದೇ ವೇಳೆ ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ. ಬಿಜೆಪಿ ಒಂದು ಕುಟುಂಬವಿದ್ದಂತೆ ರಾಜಕೀಯ ಪಕ್ಷ ಎಂದ ಮೇಲೆ ಸಣ್ಣಪುಟ್ಟ ಸಮಸ್ಯೆ ಸರ್ವೆ ಸಾಮಾನ್ಯ.
ರಾಷ್ಟ್ರೀಯ ನಾಯಕರು ಎಲ್ಲರೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಿ ಹೋಗಿದ್ದಾರೆ ಎಂದು ಕೆಎಸ್. ಈಶ್ವರಪ್ಪ ಸ್ಷಷ್ಟಪಡಿಸಿದರು.