ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಶೀಲಾ ಅವರ ವಿರುದ್ಧ ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಏಕಾಂಗಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಸಿಇಒ ಅವರು ಅಭಿವೃದ್ಧಿ ಕಾಮಗಾರಿಗಳಿಗೆ ಸರಿಯಾಗಿ ಸ್ಪಂದನೆ ನೀಡುತ್ತಿಲ್ಲ.
ನನ್ನ ಕ್ಷೇತ್ರದಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳಿಗೆ ಅನುಮೋದನೆ ಪಡೆಯಲು ಹೋದರೆ ಪಂಚಾಯತ್ ನಿಂದ ಪತ್ರ ತೆಗೆದುಕೊಂಡು ಬನ್ನಿ ಎಂದು ಸಬೂಬು ಹೇಳುತ್ತಿದ್ದಾರೆ ಎಂದು ದೂರಿದ್ದಾರೆ.
ಜಿಪಂ ಕಾರ್ಯನಿರ್ವಾಹಕ ಇಂಜಿನಿಯರ್ ಮನೋಹರ ಮಂಡೋಲಿ ಎಸಿಬಿ ದಾಳಿ ಯಿಂದಾಗಿ ಅಮಾನತ್ತಾದರೂ ಸಿಇಒ 17 ದಿನ ಕೆಲಸ ಮಾಡಿಸಿಕೊಂಡಿದ್ದು, ಕೋಟ್ಯಾಂತರ ರೂಪಾಯಿ ಅನುದಾನಕ್ಕೆ ಸಹಿ ಹಾಕಿಸಿದ್ದಾರೆ.
ಈ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ ಸಿಇಒ ಮೇಲೆ ರಾಜ್ಯದ ಬಿಜೆಪಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಆಗ್ರಹಿಸಿದ್ದಾರೆ.
ಇದಕ್ಕೆ ಸರ್ಕಾರ ಯಾವ ರೀತಿ ಸ್ಪಂದಿಸುತ್ತದೆ ಎಂಬುದು ಕಾದು ನೋಡಬೇಕು.